ನಾವು ಜೀವನದಲ್ಲಿ ಇಷ್ಟಪಟ್ಟು ಅತೀವ ಆಸಕ್ತಿಯಿಂದ ಅನೇಕ ಕೆಲಸಗಳನ್ನು ಪ್ರಾರಂಭಿಸುತ್ತೇವೆ...ಅದರ ಯಶಸ್ಸಿಗಾಗಿ ತನು,ಮನ,ಧನ ಎಲ್ಲವನ್ನೂ ವ್ಯಯಿಸಿ ಒಂದು ಘಟ್ಟಕ್ಕೆಮುಟ್ಟಿಸಿರುತ್ತೇವೆ.ಅಂದುಕೊಂಡ ಉದ್ದೇಶ ನೂರಕ್ಕೆ ನೂರು ಗೆಲುವೂ ಸಾಧಿಸಿರುತ್ತದೆ... ಹೇಗೋ ಒಂದುದಿನ ' ಸಾಕು' ಅನಿಸಿ ಬಿಡುತ್ತದೆ.ಬೇರೇನಾದರೂ ಮಾಡುವಾ ಎಂಬ ಉದ್ದೇಶವಿರಬಹುದು..ಆ ಕೆಲಸದ ಬಗ್ಗೆ ತಾತ್ಕಾಲಿಕ ಏಕತಾನತೆ ಕಾರಣವಿರಬಹುದು.ಸಹಜ break ನಹಂಬಲವಿದ್ದು ' ಮತ್ತೆ ನೋಡೋಣ' ಏನಾದರೂ ಹೊಸದನ್ನು ಪ್ರಯತ್ನಿಸುವಾ ಎಂಬ ಮಾನವ ಸಹಜ ಸ್ವಭಾವವೂ ಕಾರಣಗಳಲ್ಲಿ ಒಂದಾಗಿರಬಹುದು..ಕಾರಣವೇನೇ ಇರಲಿ ಪರಿಣಾಮ ಒಂದೇ.. ಕೆಲಸ ಕೆಲಕಾಲ ನಿಲ್ಲಿಸುವದೇ ಆದರೆ.... ಖಂಡಿತ ಚಿಂತಿಸಬೇಕಿಲ್ಲ...ಬದುಕು ನಮಗೆ ಬೇಕಾದ್ದುಕೊಡುತ್ತದೆ...ಸ್ವೀಕರಿಸಲು ನಾವು ಸಾಮರ್ಥ್ಯ ಬೆಳೆಸಿಕೊಳ್ಳಬೇಕು...ತೆಗೆದುಕೊಳ್ಳಲು ತೆರೆದುಕೊಳ್ಳಬೇಕು..ಯಾವುದೋ ಒಂದನ್ನು ಬಿಟ್ಟುಕೊಡಲು ಧೈರ್ಯಮಾಡಿದಾಗ ಮಾತ್ರ ಇನ್ನೊಂದಕ್ಕೆ 'Hello' ಹೇಳಬಲ್ಲೆವು ನಾವು... ಶುರುವಾದುದು ಒಂದಿಲ್ಲ ಒಂದು ದಿನ ಮುಗಿಯಲೇ ಬೇಕು..ಇಲ್ಲದಿದ್ದರೆ ಹೊಸದು ಹುಟ್ಟೀತು ಹೇಗೆ? ಎಲ್ಲ ಒಳ್ಳೆಯದಕ್ಕೆ ಅಂದಾಗ ಕೆಲವೊಮ್ಮೆ ಕೆಲವನ್ನು ಹಿಂದಿಕ್ಕಲೇ ಬೇಕಾಗುವದು ಅನಿವಾರ್ಯವಷ್ಟೇ ಅಲ್ಲ...ಅತ್ಯವಶ್ಯಕವೂ ಹೌದು..ಅಂಥದೊಂದು ತಿರುವು ಸಮರ್ಥನೀಯ.ಅಲ್ಲದೇಒಂದು ಒಳ್ಳೆಯ,ಒಲವಿನ,ಸಂಗತಿ ' ಮುಕ್ತಾಯ'ವಾ ದಾಗಲೇ ಅದು ' ನೆನಪಿನ ಅಮೂಲ್ಯ ಖಜಾನೆ' ಯಲ್ಲಿ ಸದಾಕಾಲ ಬಂದಿಯಾಗಲು ಸಾಧ್ಯ..ನಂತರವೂ ಅದನ್ನು ನೆನೆನೆನೆದು ಸುಖಿಸಲು ಸಾಧ್ಯ ....ಅಷ್ಟಕ್ಕೂ ನಾವು ಪುಸ್ತಕವನ್ನೆಲ್ಲಿ ಮುಚ್ಚಿಡುತ್ತಿದ್ದೇವೆ...ಕೇವಲ ಪುಟ ತಿರುವಿ ಹಾಕುತ್ತೇವೆ ಅಷ್ಟೇ...ಅದಕ್ಕೆಂದೇ ಹೇಳುತ್ತಿರುವದು...ಯಾವಾಗಲೂ ಏನೋ ಒಂದು 'ಮುಗಿದುಹೋಯಿತೆಂಬ' ಭಾವ ಬೇಡ..ಅದು ನಮ್ಮ ಬದುಕಿನಲ್ಲಿ ಘಟಿಸಿತಲ್ಲ ಎಂದೇ ಆನಂದ ಪಡೋಣ..ಆಶಾವಾದಹೇಳುವದೂ ಇದನ್ನೇ..ಉತ್ತಮವಾದುದು ಕೊನೆಗೊಂಡರೆ ಅತ್ಯುತ್ತಮ ವಾದದ್ದೇನೋ ನಮಗಾಗಿ ಕಾಯುತ್ತಿದೆ ಎಂದೇ ಅರ್ಥ..ಆದ್ದರಿಂದ ಯಾವುದಕ್ಕೂ ಹಳಹಳಿಸುವ ಕಾರಣವಿಲ್ಲ..( ಆಧಾರ-ಮನೋಹರ ನಾಯಕರ ಲೇಖನ)
Monday, 23 July 2018
Subscribe to:
Post Comments (Atom)
ಅಣ್ಣನ post graduation ಮುಗಿದು, ನೌಕರಿ ಸಿಕ್ಕು ಧಾರವಾಡದಲ್ಲಿ ಮನೆಮಾಡಿ, ನಾವು ಧಾರವಾಡಕ್ಕೆ ಬಂದದ್ದು ೧೯೬೫ರಲ್ಲಿ...ನಾವಿದ್ದ ಮನೆ ಹತ್ತು ಕೋಣೆಗಳ ಬಹು ದೊಡ್...
-
'ಹಬ್ಬ'ಗಳೇ 'ಹುಟ್ಟಿದ ದಿನ' ಗಳಾಗುತ್ತಿದ್ದ 'ಕಾಲಮಾನ' ನಮ್ಮದು... ಒಮ್ಮೆ ಒಬ್ಬ ಹಿರಿಯ ಸಾಧಕರಿಗೆ ನೂರು ತುಂಬಿದ ಸಂದರ್ಭದಲ್ಲಿ ...
-
ಈ ಹಿಂದೆ ಎರಡು ವರ್ಷಗಳ ಕಾಲ ಕೊರೋನಾ ಹೆಸರಿನಲ್ಲಿ ಸಾರ್ವಜನಿಕರಿಗೆ ಸ್ಥಾನ ಬದ್ಧತೆಯ ಶಿಕ್ಷೆ ಯಾಗಿತ್ತು.ಅದು ಜನರನ್ನು ಎಷ್ಟು ತಟಸ್ಥರಾಗಿಸಿತ್ತೆಂದರೆ ಅದಕ...
-
ನಾನೂ ಧಾರವಾಡದಲ್ಲಿ ಅವರ ಅಷ್ಟಾವಧಾನ ಕಾರ್ಯಕ್ರಮಗಳನ್ನು ನೋಡಿದ್ದೇನೆ.ಒಂದಂತೂ ನಮ್ಮ school ನಲ್ಲೇ ಆಯೋಜಿತವಾಗಿತ್ತು. ಸಂಸ್ಕೃತದಲ್ಲಿ ನನಗೆ ಹೆಚ್ಚಿನ ಜ್ಞಾನ ವಿಲ್ಲದಿದ...
No comments:
Post a Comment