Tuesday, 14 March 2023

ಕಗ್ಗಗಳು...

೧) ಬಾಳ ಹಳಿವುದದೇಕೆ? 
ಗೋಳ ಕರೆವುದದೇಕೆ? ।
ಬಾಳಿದಲ್ಲದೆ ತಪ್ಪದೇನ ಮಾಡಿದೊಡಂ ಕೇಳಿಯದು ಬೊಮ್ಮನಾಡಿಪನು ನೀನದರೊಳಗೆ ।
ಪಾಲುಗೊಳಲಳಬೇಡ -  ಮಂಕುತಿಮ್ಮ 

೨) ಪ್ರತ್ಯೇಕಸುಖವಲ್ಪದುದು, ಗಳಿಗೆತೋರ್ಕೆಯದು ।
ಆತ್ಮವಿಸ್ತಾರವಾಗಿಪುದೆ ನಿತ್ಯಸುಖ ॥
ವ್ಯಕ್ತಿಜೀವನದ ಸೊಂಪು ಸಮಷ್ಟಿಜೀವನದಿ ।
ಒಟ್ಟುಬಾಳ್ವುದ ಕಲಿಯೊ - ಮಂಕುತಿಮ್ಮ ॥ 

೩)
ಸ್ಮಿತವಿರಲಿ ವದನದಲಿ, ಕಿವಿಗೆ ಕೇಳಿಸದಿರಲಿ ।
ಹಿತವಿರಲಿ ವಚನದಲಿ, ಋತವ ಬಿಡದಿರಲಿ ॥
ಮಿತವಿರಲಿ ಮನಸಿನುದ್ವೇಗದಲಿ, ಭೋಗದಲಿ ।
ಅತಿ ಬೇಡವೆಲ್ಲಿಯುಂ - ಮಂಕುತಿಮ್ಮ ॥ ೭೨೪ ॥

4)
ಪುಸ್ತಕದಿ ದೊರೆತರಿವು ಮಸ್ತಕದಿ ತಳೆದ ಮಣಿ ।
ಚಿತ್ತದೊಳು ಬೆಳೆದರಿವು ತರು ತಳೆದ ಪುಷ್ಪ ॥
ವಸ್ತು ಸಾಕ್ಷಾತ್ಕಾರವಂತರೀಕ್ಷಣೆಯಿಂದ ।
ಶಾಸ್ತ್ರಿತನದಿಂದಲ್ಲ - ಮಂಕುತಿಮ್ಮ ॥ ೬೫ ॥



No comments:

Post a Comment

        ಧಾರವಾಡದಲ್ಲಿ ಇಂದಿಗೆ ಹತ್ತು  ದಿನ ಕಳೆದವು. ಈ ಸಲ ಅದರ ಬಗ್ಗೆ ಬರೆಯಲು ತುಂಬಾನೆ ನೋವು ಹಾಗೂ ಬೇಸರವಾಗುತ್ತಿದೆ.ಅದೇ ಜನ/ಅವೇ ಮನೆಗಳು/ಭಾವ ಬೇರೆ/ನೋವು ಬೇರೆ......